ಬುಧವಾರ, ಡಿಸೆಂಬರ್ 7, 2011

ಉತ್ತರ ಕರ್ನಾಟಕ ಪ್ರವಾಸ ಭಾಗ - ೧

ಆಫೀಸ್ ಕೆಲಸ ಹಾಗೂ ವೀಕ್ ಎಂಡ್ ಮದುವೆ ತಿರುಗಾಟಗಳ ಮಧ್ಯೆ ನನ್ನ ಬ್ಲಾಗ್ ಒಣಗಿ ನಿಂತಿದೆ. ಬರೆಯುವುದಕ್ಕೆ ವಿಷಯಗಳಿದ್ದರೂ ಸಮಯಾಭಾವಕ್ಕೋ ಏನೋ ಸ್ವಲ್ಪ ಸೋಂಬೇರಿತನ. ಸಿದ್ದರಬೆಟ್ಟ, ಯೆರ್ಕಾದು, ಕೂರ್ಗ್ .. ಮುಂತಾದ ಕೆಲವು ತಿರುಗಾಟದ ಅನುಭವಗಳನ್ನು ನಾನು ಬರೆದೆ ಇಲ್ಲ. ಹಾಗೆಯೇ ನನ್ನ ಉತ್ತರ ಕರ್ನಾಟಕದ ಪ್ರವಾಸ ಕೂಡ ಎಲ್ಲಿ ನನ್ನ ಬ್ಲಾಗ್ ಅಂಕಣ ಸೇರುವುದಿಲ್ಲವೋ ಎಂದು ಹೆದರಿ ಬರೆಯಲು ಕುಳಿತಿದ್ದೇನೆ.

ಉತ್ತರ ಕರ್ನಾಟಕದ ಐತಿಹಾಸಿಕ ಸ್ಥಳಗಳನ್ನು ನೋಡುವುದು ನನ್ನ ಬಹುದಿನಗಳ ಬಯಕೆಯಾಗಿತ್ತು. ಶಾಲೆಗೆ ಹೋಗುವ ದಿನಗಳಲ್ಲಿ ಇತಿಹಾಸದಲ್ಲಿ ಓದಿದ ಬಾದಾಮಿ, ಐಹೊಳೆ, ಪಟ್ಟದಕಲ್ಲು, ಹಂಪಿ ಮುಂತಾದ ಸ್ಥಳಗಳನ್ನು ಜೀವನದಲ್ಲಿ ಒಮ್ಮೆಯಾದರೂ ನೋಡುವ ಆಸೆ. ಹಾಗೆಯೇ ಸೆಪ್ಟೆಂಬರ್ ತಿಂಗಳು ಕೆಲಸದ ಒತ್ತಡವಿಲ್ಲದೆ ಪೂರ್ತಿ ಬಿಡುವಾಗಿದ್ದೆ. ಯಾಕೆ ಒಮ್ಮೆ ಉತ್ತರ ಕರ್ನಾಟಕದ ಸ್ವಲ್ಪ ಭಾಗಗಳನ್ನು ನೋಡಬಾರದು ಎಂದೆನಿಸಿತು.. ನನ್ನ ಗೆಳೆಯನೊಬ್ಬ ಬೆಳಗಾಂ ನಲ್ಲಿ ಮೆಡಿಕಲ್ ಆಫೀಸರ್ ಆಗಿ ಕೆಲಸ ಮಾಡುತ್ತಿದ್ದಾನೆ. ನನ್ನ ಟ್ರೈನ್ ಟಿಕೆಟ್ ಮತ್ತು ರೆಸಾರ್ಟ್ ಬುಕ್ ಮಾಡುವ ಜವಾಬ್ದಾರಿಯನ್ನು ಅವನಿಗೆ ವಹಿಸಿದೆ. ಎಷ್ಟು ಜನ ಬರುತ್ತಿದ್ದೀರಿ ಎಂದು ಕೇಳಿದ. ನನಗೆ ಈ ಪ್ರವಾಸಕ್ಕೆ ನಮ್ಮ ಗುಂಪಿನ ಜೊತೆ ಹೋಗಲು ಇಷ್ಟವಿಲ್ಲದ ಕಾರಣ, ನನ್ನ ೨ ಗೆಳತಿಯರಿಗೆ ಬರುತ್ತೀರಾ ನನ್ನ ಜೊತೆ ಎಂದು ಕೇಳಿದ್ದೆ. ಕಾರಣಾಂತರಗಳಿಂದ ಅವರು ಬರಲು ಸಾಧ್ಯವಾಗದಿದ್ದುದರಿಂದ ,ನನ್ನ ಗೆಳೆಯನಿಗೆ ನಾನು ಒಬ್ಬಳೇ ಬರುತ್ತಿದ್ದೇನೆ, ಎಲ್ಲ ವ್ಯವಸ್ತೆ ಮಾಡಿರು ಎಂದು ಮುಂಚಿತವಾಗಿ ತಿಳಿಸಿದ್ದೆ. ಈ ಪುಣ್ಯಾತ್ಮ 'ಆರ್ ಯು ಶೂರ್??' ಎಂದು ಪದೇ ಪದೇ ನಾನು ಮನೆಯಿಂದ ಹೊರಡುವವರೆಗೂ ಕೇಳಿದ್ದ. ನನ್ನ ಹುಚ್ಹುತನ ನೋಡಿ ಅವನಿಗೆ ಶಾಕ್ ಆಗಿತ್ತು. ಕೊನೆಗೂ ಹೌದು ಮಾರಾಯ, ನಾನು ಒಬ್ಬಳೇ ಆದರೂ ಪರವಾಗಿಲ್ಲ, ಬರುತ್ತೇನೆ, ನೀನು ಫ್ರೀ ಇದ್ರೆ ಕಂಪನಿ ಕೊಡು ಸಾಕು. ಇಲ್ಲಾಂದ್ರೆ ನನಗೊಂದು ಗೈಡ್ ಅರೇಂಜ್ ಮಾಡಿಕೊಡು. ನನಗೆ ನಮ್ಮ ಪಟ್ಟಾಲಮ್ ಕಟ್ಟಿಕೊಂಡು ಬರುವ ಪ್ಲಾನ್ ಇಲ್ಲವೇ ಇಲ್ಲ ಎಂದು ಖಡಾಖಂಡಿತವಾಗಿ ಹೇಳಿದೆ. ಅವನು ಸರಿ, ನೀನು ಹುಬ್ಬಳ್ಳಿ ವರೆಗೆ ಬಾ. ನಾನು ಅಲ್ಲಿಂದ ನಿನ್ನ ಪಿಕ್ ಮಾಡ್ತೇನೆ. ನಿನ್ನ ಬಾದಾಮಿ ತಲುಪಿಸಿ ನಾನು ವಾಪಾಸ್ ಹೋಗ್ತೀನಿ, ಸಾಧ್ಯ ಆದ್ರೆ ಪೂರ್ತಿ ಟ್ರಿಪ್ ನಿಂಗೆ ಕಂಪನಿ ಕೊಡ್ತೀನಿ, ಇಲ್ಲಾಂದ್ರೆ ನಿಂಗೆ ಎಲ್ಲ ವ್ಯವಸ್ಥೆ ಮಾಡಿ ನಾನು ಬೆಳಗಾಂ ಗೆ ಹೋಗ್ತೀನಿ ಎಂದು ಭರವಸೆ ಕೊಟ್ಟ. ನಾನು ಸರಿ ಎಂದು ೭:೩೦ ಕ್ಕೆ ಬೆಂಗಳೂರಿನಿಂದ ಹೊರಡುವ ಬಿಜಾಪುರ್ ಎಕ್ಷ್ಪ್ರೆಸ್ಸ(ರೈಲಿನ ಹೆಸರು ಸರಿಯಾಗಿ ನೆನಪಿಲ್ಲ) ನಲ್ಲಿ ಹೊರಟೆ. ಸರಿಯಾಗಿ ಮಧ್ಯರಾತ್ರಿ ೩: ೪೫ ಕ್ಕೆ ಹುಬ್ಬಳ್ಳಿ ತಲುಪಿ ನನ್ನ ಗೆಳೆಯನಿಗೆ ಫೋನಾಯಿಸಿದೆ. ಈ ಪುಣ್ಯಾತ್ಮ ನಿದ್ದೆಗಣ್ಣಿನಲ್ಲಿ ಇಷ್ಟು ಬೇಗ ಏನಕ್ಕೆ ಬಂದೆ ಎಂದು ಬೆಚಿಬಿದ್ದ. ೪:೩೦ ಕ್ಕೆ ಹುಬ್ಬಳ್ಳಿ ತಲುಪಬೇಕಿದ್ದ ರೈಲು ಆ ದಿನ ೪೫ ನಿಮಿಷ ಮುಂಚಿತವಾಗಿ ತಲುಪಿತ್ತು. ಹೌದು ಮಾರಾಯ, ಹುಬ್ಬಳ್ಳಿ ಯಲ್ಲೇ ಇದ್ದೇನೆ. ಇವತ್ತು ಟ್ರೈನ್ ಮುಂಚೆ ರೀಚ್ ಆಗಿದೆ. ಒಬ್ಬಳೇ ಬೇರೆ ಇದ್ದೇನೆ, ಬೇಗ ಬಾ ಎಂದು ಗೋಗರೆದ ಮೇಲೆ, ಇದು ಎಲ್ಲಿ ಕರ್ಮ ಮಾರಾಯ್ತಿ ಎಂದು ಎದ್ದು ಹೊರಟ. ಅಷ್ಟರಲ್ಲಾಗಲೇ ನಾನು ಟಿಸಿಯ ಹತ್ತಿರ ಈ ಟ್ರೈನ್ ಮುಂದೆ ಎಲ್ಲಿಯವರೆಗೆ ಹೋಗುತ್ತದೆ ಎಂದು ವಿಚಾರಿಸಿ, ಬಾದಾಮಿಗೆ ಇದರಲ್ಲೇ ಮುಂದುವರೆಯೋಣ ಎಂದು ಮತ್ತೆ ಎರಡು ಟಿಕೆಟ್ ತೆಗೆದುಕೊಂಡೆ. ೪:೩೦ ಕ್ಕೆ ನನ್ನ ಗೆಳೆಯ ಏದುಸಿರು ಬಿಡುತ್ತ ಬಂದ, ೪:೪೦ ಕ್ಕೆ ನಮ್ಮ ಪಯಣ ಹುಬ್ಬಳ್ಳಿ ಯಿಂದ ಬಾದಾಮಿ ಕಡೆಗೆ ಚುಕು ಬುಕು ಗಾಡಿಯಲ್ಲಿ ಹಳೆಯ ಕಾಲೇಜ್ ದಿನಗಳನ್ನು ನೆನೆಯುತ್ತಾ ದೌಡಾಯಿಸಿತು.

ಮುಂದುವರೆಯುವುದು .....

10 ಕಾಮೆಂಟ್‌ಗಳು:

  1. ಕಾಂತಿ ಬಹಳ ದಿನಗಳ ನಂತರ ನಿನ್ನ ಪ್ರವಾಸಿ ಲೇಖನ ...?? ಆದ್ರೆ ಬರೀ ಪೀಠಿಕೆ ಆಯ್ತಲ್ಲಾ ಮಾರಾಯ್ತೀ..?? ಓಕೆ...ಎನಿ ವೇ ಸ್ಟಾರ್ಟ್ ಮಾಡಿದೆಯಲ್ಲಾ ಮತ್ತೆ... ನೋಡ್ತೀನಿ ನಿನ್ನ ನೆಕ್ಷ್ಟ ಪೋಸ್ಟ್....

    ಪ್ರತ್ಯುತ್ತರಅಳಿಸಿ
  2. ಒಳ್ಳೆಯ ಪ್ರವಾಸಿ ಅನುಭವಗಳು ಸಿಗುವ ಸೂಚನೆ ಕಾಣ್ತಿದೆ. ಮೊದಲ ಸಂಚಿಕೆಯಲ್ಲಿಯೇ ಸಾಹಸದ ಆರಂಬ ವಾಗಿರುವಂತೆ ಕಾಣ್ತಿದೆ. ಗುಡ್ ಲಕ್ ಕಾಂತಿಯವರೇ
    ಪ್ರೀತಿಯಿಂದ ನಿಮ್ಮವ [ನಿಮ್ಮೊಳಗೊಬ್ಬಬಾಲು. ]

    ಪ್ರತ್ಯುತ್ತರಅಳಿಸಿ
  3. ಎಲ್ಲೋ ಎರಡೋ ಮೂರೋ ತಿಂಗಳಿಗೊಮ್ಮೆ ಊರಿನಕಡೆ ಹೋಗಿ ಬರೋದೆ ಸಾಹಸವಾಗಿರುವ ನನ್ನಂತವ್ರಿಗೆ ಹೊಟ್ಟೆ ಕಿಚ್ಚು ನಿಮ್ಮ ಬರಹಗಳು...... :) (ಅಲೆಮಾರಿಯ ರಾಜೇಶ ನಾಯ್ಕರ ಮೇಲೂ ಈರ್ಷ್ಯೆಯಿದೆ ನಂಗೆ..!)
    - ಪ್ರವೀಣ್

    ಪ್ರತ್ಯುತ್ತರಅಳಿಸಿ
  4. @Jalanayana: Eega pravaasa hogodu kadimeyaagiddakke, lekhana noo bartaa illa. 4 episode maadi ella bareeteeni.
    @Baalu sir: Thanks sir..
    @Praveen: thanks for reading Praveen. blogige aagaaga bteti kodi..

    ಪ್ರತ್ಯುತ್ತರಅಳಿಸಿ
  5. ಬಹಳ ಸುಂದರವಾಗಿದೆ... ನಿಮ್ಮ ಲೇಖನ... ನಿಮ್ಮ ಅನುಭವಗಳನ್ನು ಓದಿದಾಗ ಏನೋ ಒಂದು ಖುಷಿ.. ಅಷ್ಟು ಸೊಗಸಾಗಿ ಬರೆದಿದ್ದೀರಾ.. ಬೇಗನೆ ಮುಂದುವರೆಸಿ ನಿಮ್ಮ ಕಥೆಯನ್ನು... :)

    ಪ್ರತ್ಯುತ್ತರಅಳಿಸಿ
  6. ಕಾಂತಿ, ತುಂಬಾ ದಿನ ಆಯಿತು ಅಲ್ವಾ ಈ trip' ಗೆ ಹೋಗಿ ಬಂದು...??
    Continue ಮಾಡು... ಓದಲಿಕ್ಕೆ ಚನ್ನಗಿರತ್ತೆ..!! Add some photos as well..!!

    ಪ್ರತ್ಯುತ್ತರಅಳಿಸಿ
  7. ಪಟ್ಟದಕಲ್ಲಿಗೆ ತಲ್ಪೋಕೆ ಇನ್ನೆಷ್ಟು ದಿನ.....

    ಬೇಗ ಬರ್ಲಿ.......

    ಪ್ರತ್ಯುತ್ತರಅಳಿಸಿ